ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್‌ನಲ್ಲಿ ’ಆಟಿ ಸೇಲ್’

0

ಪುತ್ತೂರು: ಜಿ.ಎಲ್. ಆಚಾರ್ಯ ಪುತ್ತೂರು ಹಾಗೂ ಸುಳ್ಯ ಚಿನ್ನಾಭರಣ ಮಳಿಗೆಗಳಲ್ಲಿ ಆಗಸ್ಟ್ 1ರಿಂದ 6ರವರೆಗೆ ’ಆಟಿ ಸೇಲ್’ ಆಯೋಜಿಸಲಾಗಿದೆ. ಪುತ್ತೂರು ನೂತನ ಮಳಿಗೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಸುಳ್ಯ ಮಳಿಗೆಯ ಹತ್ತನೇ ವಾರ್ಷಿಕೋತ್ಸವ ಪ್ರಯುಕ್ತ ನಡೆಯುವ ಈ ’ಆಟಿ ಸೇಲ್’ ಕೊಡುಗೆಯಾಗಿ ಚಿನ್ನಾಭರಣಗಳ ಪ್ರತೀ ಗ್ರಾಂ ಮೇಲೆ ರೂ. 100/- ರವರೆಗೆ ರಿಯಾಯಿತಿ, ವಜ್ರಾಭರಣಗಳ ಪ್ರತೀ ಕ್ಯಾರೆಟ್ ಮೇಲೆ ರೂ. 5,000/-ದವರೆಗೆ ರಿಯಾಯಿತಿ, ಬೆಳ್ಳಿಯ ಆಭರಣಗಳ ಮೇಲೆ ಪ್ರತಿ ಕಿಲೋ ಗ್ರಾಂ ಗೆ ರೂ. 2,000/- ರಿಯಾಯಿತಿ ಇದೆ.

ಪುತ್ತೂರಿನಲ್ಲಿ 6,000 ಚದರಡಿ ಬಹುಮಹಡಿ ಮಳಿಗೆಯಲ್ಲಿ ಝಗಮಗಿಸುವ ವಿನೂತನ ಶೈಲಿಯ ಚಿನ್ನಾಭರಣಗಳ ಶ್ರೇಣಿ ಗ್ರಾಹಕರನ್ನು ಆಕರ್ಷಿಸುತ್ತಿದೆ, ಸಾವಿರಾರು ಹೊಸ ಹೊಸ ಬಗೆಯ ವಿನ್ಯಾಸದ ನೆಕ್ಲೆಸ್‌ಗಳು, ಪ್ರಾಚಿ ಎಂಬ ಹೆಸರಿನ ಆಂಟಿಕ್ ಆಭರಣಗಳು, ವಜ್ರಾಭರಣಗಳು, ಮಕ್ಕಳ, ಮಹಿಳೆಯರ ಹಾಗೂ ಪುರುಷರ ನಾನಾ ಅಭಿರುಚಿಗೆ ಒಪ್ಪುವ ಆಭರಣಗಳ ಮಹಾಪೂರ ಇಲ್ಲಿದೆ. ವಿಶಾಲವಾದ ವಾಹನ ಪಾರ್ಕಿಂಗ್, ನಗುಮೊಗದ ಸೇವೆ, ಸಂಪೂರ್ಣ ಪಾರದರ್ಶಕ ವ್ಯವಹಾರ, ನ್ಯಾಯೋಚಿತ ತಯಾರಿಕಾ ವೆಚ್ಚ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ವೈಶಿಷ್ಟ್ಯ. ಎಲ್ಲಾ ಪೀಳಿಗೆಯ ಅಭಿರುಚಿಗೆ ತಕ್ಕಂತೆ ಚಿನ್ನದ ಆಭರಣಗಳ ವಿಶಿಷ್ಟ ಕಲೆಕ್ಷನ್ ಇಲ್ಲಿದೆ. ಗ್ರಾಹಕರಿಗೆ ತಮ್ಮ ಮನದಿಚ್ಚೆಯ ಆಭರಣಗಳ ಆರಾಮದಾಯಕ ಆಯ್ಕೆಗಾಗಿ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳಿಗೆ ಪ್ರತ್ಯೇಕ ವಿಭಾಗಗಳಿವೆ. ಗ್ರಾಹಕರ ಅನುಕೂಲಕ್ಕಾಗಿ ಪುತ್ತೂರು ಮಳಿಗೆ ಭಾನುವಾರಗಳಂದು ತೆರೆದಿರುತ್ತದೆ.

LEAVE A REPLY

Please enter your comment!
Please enter your name here