ಮೊಟ್ಟೆತಡ್ಕ ಪರಿಸರದಲ್ಲಿ ವಿದ್ಯುತ್ ಸಮಸ್ಯೆಯಿಂದ  ಜನರಿಗೆ  ತೊಂದರೆ – ಬಗೆ ಹರಿಸಲು ಮೆಸ್ಕಾಂ ಗೆ ನಗರ ಕಾಂಗ್ರೆಸ್ ಅಗ್ರಹ

0

ಪುತ್ತೂರು : ನಗರ ಸಭಾ ವ್ಯಾಪ್ತಿಯ ಕೆಮ್ಮಿಂಜೆ  ಗ್ರಾಮದ ಮೊಟ್ಟೆತಡ್ಕ ಪರಿಸರದಲ್ಲಿ ವಿದ್ಯುತ್ ಕಣ್ಣು ಮುಚ್ಚಾಳೆ ಆಡುತ್ತಿದ್ದು, ವಿದ್ಯುತ್ ಸಮಸ್ಯೆಯಿಂದ ಜನರಿಗೆ ಕುಡಿಯುವ ನೀರಿನ ತೊಂದರೆ ಆಗುತ್ತಿದ್ದು, ಹಲವು ದಿನಗಳಿಂದ ಈ ಸಮಸ್ಯೆ ಉಂಟಾಗಿರುತ್ತದೆ, ಇದನ್ನು ಕೂಡಲೇ ಸರಿಪಡಿಸಿ ಕೊಡಬೇಕೆಂದು ಮೆಸ್ಕಾಂ ಅಧಿಕಾರಿಗಳಿಗೆ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ ಹಾಗೂ ಸ್ಥಳೀಯ ವಾರ್ಡ್ ಸದಸ್ಯೆ ಶೈಲಾ ಪೈ ಆಗ್ರಹಿದ್ದಾರೆ. ಈ ಕುರಿತು ಸಮಸ್ಯೆಗಳನ್ನು ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಮೆಸ್ಕಾಂ ನ ಸಹಾಯಕ ಕಾರ್ಯಪಾಲಕ ಇಂಜಿನಿಯರರಾದ ರಾಮಚಂದ್ರ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here