ಪುತ್ತೂರು: ರಾಜ್ಯದಲ್ಲಿ ತೀವ್ರ ಕುತೂಹಲ ಉಂಟುಮಾಡಿದ್ದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಗಳಾದ ಝಾಕಿರ್ ಹಾಗೂ ಶಫೀಕ್ರವರನ್ನು ಜು.29ರಂದು ಸಂಜೆ ನ್ಯಾಯಾಲಯವು ಹೆಚ್ಚಿನ ತನಿಖೆಗಾಗಿ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.