ಪುತ್ತೂರು : ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ದ.ಕ.ಜಿ.ಪಂ.ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ಮತ್ತು ದ.ಕ.ಜಿ.ಪಂ.ಸರಕಾರಿ ಪ್ರೌಢ ಶಾಲೆ ನ್ಯೂಪಡ್ಪು, ಹರೇಕಳ ಇದರ ಆಶ್ರಯದಲ್ಲಿ ಜು.23ರಂದು ಮಂಗಳೂರು ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ 1-14 ವಯೋಮಾನ ವರ್ಗದ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ದ್ವಿತೀಯ ಸ್ಥಾನ ಗಳಿಸಿದೆ. ಈ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ೮ನೇ ತರಗತಿಯ ಸಮನ್ವಿತಾ ಕೆ (ವಿನ್ಯಾಸ್ ಕನ್ಸ್ಟ್ರಕ್ಷಷನ್ ಮಾಲಕ ಬಪ್ಪಳಿಗೆಯ ಕಿಶೋರ್ ಕುಮಾರ್ ಮತ್ತು ರೂಪಶ್ರೀ ಕೆ. ರವರ ಪುತ್ರಿ), ಡಿ.ಹರ್ಷ (ಚಿಕ್ಕ ಪುತ್ತೂರಿನ ಎಸ್. ಶಿವಕುಮಾರ್ ಮತ್ತು ಎಸ್. ಪೋನ್ನಿರವರ ಪುತ್ರಿ) ರವರು ಪುತ್ತೂರು ತಾಲೂಕನ್ನು ಪ್ರತಿನಿಧಿಸಿರುತ್ತಾರೆ.8ನೇ ತರಗತಿಯ ಸಮನ್ವಿತಾ ಕೆ. ರವರು ಅಕ್ಟೋಬರ್ ನಲ್ಲಿ ಚಾಮರಾಜನಗರದಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ದಕ್ಷಿಣ ಜಿಲ್ಲೆಯನ್ನು ಪ್ರತಿನಿಧಿಸಿ, ಭಾಗವಹಿಸಲಿದ್ದಾಳೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ತಿಳಿಸಿದ್ದಾರೆ.