ಪುತ್ತೂರು: ೨೦೨೨ನೇ ಸಾಲಿನ ಸಿಇಟಿ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಅಬ್ಸಲ್ಯೂಟ್ ಲರ್ನಿಂಗ್ ಅಕಾಡೆಮಿಯ ವಿದ್ಯಾರ್ಥಿಗಳು ಸಾಧನೆಯನ್ನು ಮಾಡಿದ್ದಾರೆ. ವಿದ್ಯಾರ್ಥಿನಿ ಕುಮಾರಿ ಹರ್ಷಿತಾ ಟಿ.ಆರ್. ಅಗ್ರಿಕಲ್ಚರ್ ವಿಭಾಗದಲ್ಲಿ ೫೭ನೇ, ವೆಟರ್ನರಿ ವಿಭಾಗದಲ್ಲಿ ೯೬ನೇ, ಬಿಎನ್ವೈಎಸ್ ವಿಭಾಗದಲ್ಲಿ ೨೭೯೪ನೇ ರ್ಯಾಂಕ್ ಪಡೆದಿದ್ದಾರೆ. ಮಹಮ್ಮದ್ ಇಫ್ತೆಕಾರ್ ಅಗ್ರಿಕಲ್ಚರ್ ವಿಭಾಗದಲ್ಲಿ ೧೮೭೫ನೇ ಹಾಗೂ ಬಿಎನ್ವೈಎಸ್ ವಿಭಾಗದಲ್ಲಿ ೨೦೪೭ನೇ ರ್ಯಾಂಕ್ ಪಡೆದಿದ್ದಾರೆ. ಈ ಫಲಿತಾಂಶವು ಪುತ್ತೂರಿನ ಶೈಕ್ಷಣಿಕ ಕ್ಷೇತ್ರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಹತ್ವದ ಮೈಲುಗಲ್ಲಾಗಿದ್ದು, ಅಬ್ಸಲ್ಯೂಟ್ ಅಕಾಡೆಮಿಯ ವಿದ್ಯಾರ್ಥಿಗಳು ನಿರಂತರವಾಗಿ ಸಾಧನೆಯನ್ನು ಮಾಡುತ್ತಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.