ಜಿಲ್ಲೆಯಾದ್ಯಂತ ಮತ್ತೆ ಎರಡು ದಿನ ರಾತ್ರಿ ನಿರ್ಬಂಧ ಮುಂದುವರಿಕೆ: ದ.ಕ ಜಿಲ್ಲಾಧಿಕಾರಿ ಆದೇಶ

0

ಪುತ್ತೂರು: ದ.ಕ.ಜಿಲ್ಲಾದ್ಯಂತ ಪೊಲೀಸ್ ಇಲಾಖೆಯ ಮನವಿಯಂತೆ ಮತ್ತೆ ಎರಡು ದಿನ ರಾತ್ರಿ ನಿರ್ಬಂಧ ಮುಂದುವರಿಸಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದು ಆ.3ರ ತನಕ ನಿರ್ಬಂಧ ಜಾರಿಯಲ್ಲಿರಲಿದೆ.

ಇತ್ತೀಚಿಗೆ ಬೆಳ್ಳಾರೆ ಮತ್ತು ಸುರತ್ಕಲ್ ಮಂಗಳಪೇಟೆಯಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಜು.೨೯ರ ಸಂಜೆ ೬ರಿಂದ ಆ.೧ರ ಮುಂಜಾನೆ ೬ರವರೆಗೆ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ ರಾತ್ರಿ ನಿರ್ಬಂಧ ಹೇರಲಾಗಿತ್ತು. ಇದೀಗ ಮತ್ತೆ ಎರಡು ದಿನಗಳ ಕಾಲ ರಾತ್ರಿ ನಿರ್ಬಂಧ ಹೇರಿದ್ದು ಆ.೩ರ ಬೆಳಗ್ಗಿನ ತನಕ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here