ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಚಾರ್ವಾಕ ಸಹಕಾರ ಸಂಘಕ್ಕೆ ಸಹಾಯ ಧನ ವಿತರಣೆ

0

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಣಿಯೂರು ಇದರ ಶಾಖಾ ಕಟ್ಟಡ ಉಧ್ಘಾಟನಾ ಸಮಾರಂಭದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ರವರು ಐದು ಲಕ್ಷ ಸಹಾಯ ಧನ ನೀಡುವುದಾಗಿ ಘೋಷಿಸಿದ್ದು ಈ ಮೊತ್ತವನ್ನು ಬ್ಯಾಂಕಿನ ನಿರ್ದೇಶಕ ರಾದ ಶಶಿಕುಮಾರ್ ರೈ ಬಾಲ್ಯೊಟ್ಟು ರವರು ಸಂಘದ ಅಧ್ಯಕ್ಷ ರಾದ ಅನಂದ ಗೌಡ ಮೇಲ್ಮನೆ ರವರಿಗೆ ಹಸ್ತಾಂತರ ಮಾಡಿದರು.. ಈ ಸಂದರ್ಭದಲ್ಲಿ ಚಾರ್ವಾಕ ಸಹಕಾರ ಸಂಘದ ನಿರ್ದೇಶಕರಾದ ವಿಶ್ವನಾಥ ಕೂಡಿಗೆ, ಹರೀಶ ಗೌಡ ಅಂಬುಲ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶೋಕ್ ಗೌಡ, ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ರತ್ನ ಕುಮಾರ್, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here