ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಿಟ್ಲ ಇದರ ವತಿಯಿಂದ ಮಾಣಿ ವಲಯದ ಇಡ್ಕಿದು ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟದ ಸದಸ್ಯರಿಂದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸ್ವಚ್ಚತೆ ನಡೆಯಿತು. ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುರೇಶ್ ಮುಕ್ಕುಡ, ಜನಜಾಗೃತಿ ವಲಯಾಧ್ಯಕ್ಷ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ದೇವಾಲಯದ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಪುಲ್ಲಚಂದ್ರ ಪಿ.ಜಿ. ಕೋಲ್ಪೆ, ಒಕ್ಕೂಟದ ಅಧ್ಯಕ್ಷರಾದ ದೇಜಪ್ಪ, ಮೇಲ್ವಿಚಾರಕರು ವಿನೋದ, ಸೇವಾ ಪ್ರತಿನಿಧಿ ದಿವ್ಯ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.