ಪುತ್ತೂರು: ಬೆಳ್ಳಾರೆ ಠಾಣೆಯ ನೂತನ ಎಸ್.ಐ. ಸುಹಾಸ್ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಅವರ ಪಾರ್ಥೀವ ಶರೀರದ ಮೆರವಣಿಗೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಆರೋಪದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆ ಎಸ್.ಐ ರುಕ್ಮ ನಾಯ್ಕರವರ ವರ್ಗಾವಣೆಗೊಳಿಸಲಾಗಿತ್ತು. ತೆರವಾದ ಸ್ಥಾನಕ್ಕೆ ಕುಂದಾಪುರದಿಂದ ಸುಹಾಸ್ ಆರ್. ವರ್ಗಾವಣೆಗೊಂಡು ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.