ಪುತ್ತೂರು; ಪುರಾತರ ಪ್ರಸಿದ್ದ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ತುಳುನಾಡಿನ ಹಬ್ಬಗಳಲ್ಲಿ ಒಂದಾಗಿರುವ ನಾಗರಪಂಚಮಿ ಆಚರಣೆ ಆ.2ರಂದು ನಡೆಯಿತು.
ದೇವಸ್ಥಾನದ ನಾಗ ಸನ್ನಿಧಿಯಲ್ಲಿ ಮುಂಜಾನೆ ನಾಗತಂಬಿಲ ನಡೆದ ಬಳಿಕ ನಾಗನಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ ನೆರವೇರಿತು. ಮುಂಜಾನೆಯಿಂದಲೇ ಕ್ಷೇತ್ರಕ್ಕೆ ಆಗಮಿಸಿದ ಸಾವಿರಾರು ಮಂದಿ ಭಕ್ತಾದಿಗಳು ನಾಗನಿಗೆ ಪ್ರಿಯವಾದ ಕ್ಷೀರಾಭಿಷೇಕ, ಸೀಯಾಳಾಭಿಷೇಕ ಹಾಗೂ ನಾಗತಂಬಿಲ ಸೇವೆಗಳನ್ನು ಸಲ್ಲಿಸಿ ಪುನೀತರಾದರು.