ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ವತಿಯಿಂದ ಸಾಲ್ಮರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಅಗತ್ಯವಿದ್ದ ಐದು ಕುರ್ಚಿಗಳನ್ನು ವಿತರಿಸಲಾಯಿತು. ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಅಧ್ಯಕ್ಷರ ಕೇಶವ ಪೂಜಾರಿ ಬೆದ್ರಾಳ, ಕಾರ್ಯದರ್ಶಿ ಮೋಹನ್ ನಾಯಕ್, ನಿಕಟಪೂರ್ವ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಅನ್ವರ್ ಖಾಸಿಂ ಮತ್ತು ಸದಸ್ಯರು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಂದ್ರಾವತಿಯವರಿಗೆ ಐದು ಕುರ್ಚಿಗಳನ್ನು ಹಸ್ತಾಂತರಿಸಿದರು.