ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಧನೆಗೆ ಸತತ 4ನೇ ಬಾರಿ ಪ್ರಶಸ್ತಿ ಪುರಸ್ಕಾರ

0

ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ವಿಶೇಷ ಸಾಧನೆಗೈದಿರುವುದರಿಂದ ದ.ಕ.ಜಿ.ಕೇ.ಸಹಕಾರಿ ಬ್ಯಾಂಕಿನಿಂದ 4ನೇ ಬಾರಿಗೆ ಪ್ರಶಸ್ತಿಗೆ ಆಯ್ಕೆಯಾಗಿರುತ್ತದೆ.

2021-22ನೇ ಸಾಲಿನ ಸಹಕಾರ ಸಂಘದ ಸಾಧನೆಯನ್ನು ಪರಿಗಣಿಸಿ ಅಡಿಟ್ ವರ್ಗೀಕರಣದಲ್ಲಿ `ಎ’ ತರಗತಿ ಸ್ಥಾನ ಹೊಂದಿ ಅತ್ಯುತ್ತಮವಾದ ಕಾರ್ಯನಿರ್ವಹಣೆಗಾಗಿ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ದ.ಕ.ಜಿ.ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ ಪ್ರಶಸ್ತಿಗೆ ಭಾಜನವಾಗಿರುತ್ತದೆ.

2021-22ನೇ ಸಾಲಿನಲ್ಲಿ ಸಹಕಾರಿ ಸಂಘವು 3863 `ಎ’ ತರಗತಿ ಸದಸ್ಯರನ್ನು ಹೊಂದಿದ್ದು ರೂ.2 ಕೋಟಿ 74 ಲಕ್ಷ ಪಾಲು ಬಂಡವಾಳ ಹೊಂದಿರುತ್ತದೆ. ಸಹಕಾರಿ ಸಂಘವು ರೂ.22 ಕೋಟಿ 50 ಲಕ್ಷ ಠೇವಣಿ ಹೊಂದಿದ್ದು, ಸದಸ್ಯರ ಹೊರಬಾಕಿ ಸಾಲ ರೂ.24 ಕೋಟಿ 67 ಲಕ್ಷ ಇರುತ್ತದೆ. 2021-22ನೇ ಸಾಲಿನಲ್ಲಿ ರೂ.196 ಕೋಟಿ 81 ಲಕ್ಷ ವ್ಯವಹಾರ ನಡೆಸಿದ್ದು ಪ್ರಸಕ್ತ ಸಾಲಿನಲ್ಲಿ ರೂ.86ಲಕ್ಷ ನಿವ್ವಳ ಲಾಭ ಗಳಿಸಿರುತ್ತದೆ.

ಪ್ರಸಕ್ತ ಸಾಲಿನಲ್ಲಿ ನಮ್ಮ ಸಹಕಾರ ಸಂಘವು ಸುಮಾರು ರೂ.1ಕೋಟಿ 25 ಲಕ್ಷ ಲಾಭ ಗಳಿಸುವ ನಿರೀಕ್ಷೆ ಮಾಡಿದ್ದೆವು. ಆದರೆ ದ.ಕ.ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ಇಟ್ಟಿರುವ ಠೇವಣಿಗಳಿಗೆ ರೂ.13 ಲಕ್ಷ ಟಿ.ಡಿ.ಎಸ್ ಪಾವತಿಸಲಾಗಿದೆ, ಆದಾಯ ತೆರಿಗೆ ಬಾಬ್ತು ರೂ.13ಲಕ್ಷ 62 ಸಾವಿರ ಪಾವತಿಸಲಾಗಿದೆ. ಮತ್ತು ಸರಕಾರದ ಎಂಕೆಸಿಸಿ ಸಾಲದ ಬಡ್ಡಿ ರೂ.17 ಲಕ್ಷ 59 ಸಾವಿರ ಬರಲು ಬಾಕಿ ಇರುತ್ತದೆ. ಈ ಎಲ್ಲಾ ಮೊತ್ತಗಳಿಗೆ ಲಾಭಾಂಶದಲ್ಲಿ ಕಾಯ್ದಿರಿಸಲಾಗಿದ್ದು ಪ್ರಸಕ್ತ ಸಾಲಿನಲ್ಲಿ ಲಾಭಾಂಶವು ಕಡಿಮೆಯಾಗಲು ಕಾರಣವಾಗಿರುತ್ತದೆ. ಆರ್ಯಾಪು ಸಹಕಾರಿ ಸಂಘದ ಕಾರ್ಯ ಕ್ಷೇತ್ರವು 3 ಗ್ರಾಮಗಳಾದ ಆರ್ಯಾಪು, ಕೆಮ್ಮಿಂಜೆ ಮತ್ತು ಕುರಿಯ ಗ್ರಾಮಗಳನ್ನೊಳಗೊಂಡಿರುತ್ತದೆ. ಆರ್ಯಾಪು ಗ್ರಾಮದ ಸಂಪ್ಯ ಎಂಬಲ್ಲಿ ಕೇಂದ್ರ ಕಛೇರಿ ಹೊಂದಿದ್ದು ಕುರಿಯ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಶಾಖಾ ಕಛೇರಿಯನ್ನು ಹೊಂದಿರುತ್ತದೆ. ಆರ್ಯಾಪು ಗ್ರಾಮದ ಸಂಪ್ಯ ಹಾಗೂ ಒಳತ್ತಡ್ಕ ಮತ್ತು ಕುರಿಯ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಪಡಿತರ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಹಕಾರಿ ಸಂಘದ ಕೇಂದ್ರ ಕಛೇರಿಯಲ್ಲಿ ಕೃಷಿಕರಿಗೆ ಪಹಣಿ ಪತ್ರ ಒದಗಿಸಿಕೊಡುವ ಸೌಲಭ್ಯ ಕಲ್ಪಿಸಲಾಗಿದೆ. ಕುರಿಯ ಶಾಖೆಯಲ್ಲಿ ಕಛೇರಿಯ ಭದ್ರತೆಗೆ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಸಹಕಾರ ಸಂಘದ ರಸ್ತೆ ಬದಿಯಲ್ಲಿ ಹೊಸದಾಗಿ ಸಿ.ಸಿ ಕ್ಯಾಮರಾ ಅಳವಡಿಸಲಾಗಿದೆ. ಆರ್ಯಾಪು ಸಹಕಾರಿ ಸಂಘದ ಆಡಳಿತ ಮಂಡಳಿಯಲ್ಲಿ 12 ಜನ ಚುನಾಯಿತ ಸದಸ್ಯರಿದ್ದು ಅಧ್ಯಕ್ಷರಾಗಿ ಹೆಚ್. ಮಹಮ್ಮದ್ ಆಲಿ, ಉಪಾಧ್ಯಕ್ಷರಾಗಿ ಕೆ.ಸದಾನಂದ ಶೆಟ್ಟಿ ಕೂರೇಲು, ನಿರ್ದೇಶಕರುಗಳಾಗಿ ಬಿ.ಸುರೇಂದ್ರ ರೈ ಬಳ್ಳಮಜಲು, ಬಿ.ಗಣೇಶ್ ರೈ ಬಳ್ಳಮಜಲು, ಸತೀಶ್ ನಾಯ್ಕ್ ಪರ್ಲಡ್ಕ, ಗಣೇಶ್ ರೈ ತೊಟ್ಲಮೂಲೆ, ಶೀನಪ್ಪ ಮರಿಕೆ, ಇಸ್ಮಾಯಿಲ್ ಮರಿಕೆ, ಮೀನಾಕ್ಷಿ ನೀರ್ಕಜೆ, ಚಂದ್ರಕಲಾ ಓಟೆತ್ತಿಮಾರು, ತಿಮ್ಮಪ್ಪ ಜಂಗಮೊಗೇರು, ಸಂಶುದ್ದೀನ್ ನೀರ್ಕಜೆ. ಹಾರೀಶ್ ಸಂಟ್ಯಾರು. ವಲಯ ಮೇಲ್ವಿಚಾರಕರಾದ ಶರತ್ ಡಿ. ಸಂಘದ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಂತಿ ಭಾಸ್ಕರ್ ಹಾಗೂ ಸಿಬ್ಬಂದಿಗಳಾಗಿ ಅಜಿತ್ ಕುಮಾರ್ ರೈ, ಶೀಮತಿ ಸುಭಾಷಿನಿ, ಉಮೇಶ್ ಎಸ್.ಕೆ. ವಿನಯ್ ಕುಮಾರ್, ರಾಜೇಶ್ ಬಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರತಿಷ್ಟಿತ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಂಪ್ಯ ಇದರ 2021-22ರ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ ಪ್ರೋತ್ಸಾಹಕ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತೀವ ಸಂತಸವಾಗಿದೆ. ಆ.5 ರಂದು ದ.ಕ.ಜಿ.ಕೇ.ಸ.ಬ್ಯಾಂಕಿನ ಮಹಾಸಭೆಯಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದು ಈ ಪ್ರಶಸ್ತಿಗೆ ಕಾರಣಕರ್ತರಾದ ನಮ್ಮ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳಿಗೆ, ಸಹಕಾರಿ ಸಂಘದ ಗೌರವನ್ವಿತ ಸದಸ್ಯರುಗಳಿಗೆ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಮತ್ತು ಎಲ್ಲಾ ನಿರ್ದೇಶಕರುಗಳಿಗೆ ಮತ್ತು ನಮ್ಮ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿರವರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಹೃತ್ಫೂರ್ವಕ ಕೃತಜ್ಙತೆಗಳನ್ನು ಸಲ್ಲಿಸುತ್ತಿದ್ದೇನೆ.

-ಹೆಚ್. ಮಹಮ್ಮದ್ ಆಲಿ ಅಧ್ಯಕ್ಷರು, ಆರ್ಯಾಪು ಪ್ರಾ.ಕೃ.ಪ.ಸ.ಸಂ.ನಿ.

ಆ.5 ರಂದು ಪ್ರಶಸ್ತಿ ಪ್ರದಾನ..

ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಗೊಂಡ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಆ.5 ರಂದು ನಡೆಯುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಕಛೇರಿಯಲ್ಲಿ ನಡೆಯುವ ಬ್ಯಾಂಕಿನ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್. ರಾಜೇಂದ್ರ ಕುಮಾರ್‌ರವರು ಪ್ರಶಸ್ತಿಯನ್ನು ವಿತರಿಸಿ ಸನ್ಮಾನಿಸಲಿದ್ದಾರೆ.

LEAVE A REPLY

Please enter your comment!
Please enter your name here