ಪೆರ್ನೆ: ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್‌ ನಿಂದ 1 ಲಕ್ಷ ರೂಪಾಯಿ ಚೆಕ್ ವಿತರಣೆ

0

ಉಪ್ಪಿನಂಗಡಿ: ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಸದಸ್ಯರಾಗಿದ್ದು, ಕೊರೊನಾದಿಂದ ಮೃತಪಟ್ಟಿದ್ದ ಸೇಸಪ್ಪ ಶೆಟ್ಟಿ ಕುಟುಂಬಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌  ವತಿಯಿಂದ ಕೊಡ ಮಾಡಿದ 1 ಲಕ್ಷ ರೂಪಾಯಿ ಚೆಕ್‌ನ್ನು ಆ. 2ರಂದು ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಕಚೇರಿಯಲ್ಲಿ ವಿತರಿಸಲಾಯಿತು.

ಪೆರ್ನೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ತೋಯಜಾಕ್ಷ ಶೆಟ್ಟಿಯವರು ಮೃತ ಸೇಸಪ್ಪ ಶೆಟ್ಟಿಯವರ ಪತ್ನಿ ಹೇಮಾವತಿ ಶೆಟ್ಟಿಯವರಿಗೆ ಚೆಕ್ ಹಸ್ತಾಂತರಿಸಿದರು. ಕಾರ್‍ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ತನಿಯಪ್ಪ ಪೂಜಾರಿ, ನಿರ್ದೇಶಕ ಸುನಿಲ್ ನೆಲ್ಸನ್ ಪಿಂಟೋ, ಮುಖ್ಯ ಕಾರ್‍ಯನಿರ್ವಹಣಾಧಿಕಾರಿ ಶ್ರೀಮತಿ ಪುಷ್ಪಾ ಡಿ., ಸಿಬ್ಬಂದಿಗಳಾದ ಶ್ರೀಮತಿ ನಳಿನಾಕ್ಷಿ ಶೆಟ್ಟಿ, ಸದಸ್ಯರಾದ ಮೋನಪ್ಪ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here