ಕಡಬ : ಎಡ ಬಿಡದೆ ಸುರಿಯುತ್ತಿರುವ ಮಹಾ ಮಳೆಗೆ ರೆಂಜಿಲಾಡಿ ಗ್ರಾಮ ಕುಬಲಾಡಿಯಲ್ಲಿ ಹಳ್ಳದ ನೀರು ಮನೆಗೆ ನುಗ್ಗಿ ಮನೆ ಜಲಾವೃತವಾದ ಘಟನೆ ಆ.2ರ ರಾತ್ರಿ ನಡೆದಿದೆ.
ವಿಷಯ ತಿಳಿದ ಸ್ಥಳೀಯಾಡಳಿತದ ಅಧಿಕಾರಿಗಳು ಹಾಗೂ ಎನ್.ಡಿ.ಆರ್.ಎಫ್. ತಂಡದವರು ಮಧ್ಯರಾತ್ರಿಯೇ ಸ್ಥಳಕ್ಕೆ ತೆರಳಿ ಮನೆ ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ತನಿಯಪ್ಪ (54), ಭಾಗೀರಥಿ (50), ಚಂದಪ್ಪ (41), ರೇವತಿ (34), ಅರುಣಾ (15), ಅನಿತಾ (9), ಅಂಜಲಿ (6) ಸೇರಿ ಒಟ್ಟು 7 ಜನರನ್ನು ರಕ್ಷಿಸಲಾಗಿದ್ದು ಸದ್ಯ ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿದೆ.
ರಕ್ಷಣಾ ಕಾರ್ಯ ವೇಳೆ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಗ್ರಾಮಕರಣಿಕ ಸಂತೋಷ್ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.