ಅಡ್ಡಹೊಳೆ: ಕೆಎಸ್‌ಆರ್‌ಟಿಸಿ ಬಸ್ಸು, ಕಾರು ಡಿಕ್ಕಿ ; ಕಾರಿನಲ್ಲಿದ್ದ ಇಬ್ಬರಿಗೆ ಗಾಯ

0

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಾರೊಂದರ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಆ.2ರಂದು ಸಂಜೆ ನಡೆದಿದೆ.

ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸು ಹಾಗೂ ಸಕಲೇಶಪುರದಿಂದ ವಿಟ್ಲಕ್ಕೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ, ಪುತ್ತೂರಿನ ಖಾಸಗಿ ಕಾಲೇಜಿನ ಉಪನ್ಯಾಸಕ ವಿಟ್ಲ ಮೂಲದ ಗೋವಿಂದರಾಜ್ ಶರ್ಮ(32ವ.)ಹಾಗೂ ಕಾರಿನಲ್ಲಿದ್ದ ರಾಮಕುಂಜ ನಿವಾಸಿ ಓಂಕಾರ ಪ್ರಸಾದ(30ವ.)ಎಂಬವರು ಗಾಯಗೊಂಡವರಾಗಿದ್ದಾರೆ. ಬಸ್ಸು ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ. ಗೋವಿಂದರಾಜ್ ಶರ್ಮರವರ ಕಾಲಿಗೆ ಹಾಗೂ ಓಂಕಾರ ಪ್ರಸಾದ್‌ರವರ ತಲೆಗೆ ಗಾಯವಾಗಿರುವುದಾಗಿ ವರದಿಯಾಗಿದೆ. ಗಾಯಾಳುಗಳನ್ನು ಶಿರಾಡಿ 108 ಸಿಬ್ಬಂದಿಗಳು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾರು,ಬೈಕ್ ಡಿಕ್ಕಿ: ಇದೇ ಸ್ಥಳದಲ್ಲಿ ಮಧ್ಯಾಹ್ನ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಬೆಂಗಳೂರು ಮೂಲದ ಭರತ್(25ವ.)ಎಂಬವರ ಕಾಲಿಗೆ ಗಾಯವಾಗಿದೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here