ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:ಗಂಭೀರವಾಗಿ ಪರಿಗಣಿಸಲು ಎನ್‌ಐಎಗೆ ಸೂಚಿಸುವೆ-ಸಂಸದ ನಳಿನ್‌ರಿಗೆ ಅಮಿತ್ ಷಾ ಭರವಸೆ

0

ಪುತ್ತೂರು:ದ.ಕ.ಸಂಸದರೂ ಆಗಿರುವ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ನವದೆಹಲಿಯಲ್ಲಿ ಆ.೩ರಂದು ಭೇಟಿ ಮಾಡಿದರು.ಕೆಲ ದಿನಗಳ ಹಿಂದೆ ಬೆಳ್ಳಾರೆಯಲ್ಲಿ ನಡೆದಿರುವ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಇವರ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿಕೊಂಡಿರುವುದಕ್ಕೆ ಕೇಂದ್ರ ಗೃಹ ಸಚಿವರಿಗೆ ಧನ್ಯವಾದ ಸಮರ್ಪಿಸಿದ ನಳಿನ್ ಕುಮಾರ್ ಕಟೀಲ್, ಈ ಪ್ರಕರಣದ ತನಿಖೆಯಲ್ಲಿ ವಿಶೇಷ ಕಾಳಜಿ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುವಂತೆ ವಿನಂತಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಷಾ ಅವರು, ರಾಜ್ಯದಲ್ಲಿ ಎನ್‌ಐಎಯನ್ನು ಬಲಗೊಳಿಸುವುದರೊಂದಿಗೆ ಎನ್‌ಐಎಗೆ ವಹಿಸಿರುವ ಎಲ್ಲಾ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗುವವರಿಗೆ ಕಠಿಣ ಸಂದೇಶವನ್ನು ನೀಡಲಾಗುವುದು ಎಂದು ಹೇಳಿದರಲ್ಲದೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಎನ್‌ಐಎ ಅಧಿಕಾರಿಗಳಿಗೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here