ನೆಲ್ಯಾಡಿ: ಸೂರ್ಯನಗರ ಶ್ರೀರಾಮ ವಿದ್ಯಾಲಯದಲ್ಲಿ ಜುಲೈ ತಿಂಗಳ ಸಾಮೂಹಿಕ ಹುಟ್ಟುಹಬ್ಬವನ್ನು ಜು.೩೦ರಂದು ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನೆಲ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಹಾಗೂ ಚಂದ್ರಿಕಾ ಶೆಟ್ಟಿ ದಂಪತಿ ಜುಲೈ ತಿಂಗಳಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ನೀಡಿ ಆಶೀರ್ವದಿಸಿ, ಸಂಸ್ಕೃತಿ ಶಿಕ್ಷಣಕ್ಕೆ ಅಡಿಪಾಯ, ಪ್ರತಿಯೊಬ್ಬರು ಸಂಸ್ಕಾರವಂತರಾಗಬೇಕೆಂದು ಹೇಳಿ ಶುಭಹಾರೈಸಿದರು. ಶಾಲಾ ಮುಖ್ಯಗುರು ಗಣೇಶ್ ವಾಗ್ಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ವಾತಿ ಮಾತಾಜಿ ಸ್ವಾಗತಿಸಿ, ಸುಜನ ಮಾತಾಜಿ ವಂದಿಸಿದರು. ಅಶ್ವಿನಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.