ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಉಪನಿರ್ದೇಶಕರ ಕಛೇರಿ ಮಂಗಳೂರು, ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ರಾಜರಾಜೇಶ್ವರಿ ಸರಕಾರಿ ಪ್ರೌಢಶಾಲೆ ಪೊಳಲಿ ಇದರ ಸಹಯೋಗದೊಂದಿಗೆ ಜುಲೈ30 ರಂದು ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕು| ವಂದ್ಯ ಪ್ರಭು ಜಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಜಿ ನಾರಾಯಣ ಪ್ರಭು ಮತ್ತು ಸುಲಕ್ಷಣಾ ಪ್ರಭು ಜಿ ಯವರ ಪುತ್ರಿ.