ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ  ಐರಿಸ್ ತರಬೇತಿ ಕಾರ್ಯಗಾರ

0

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತರಬೇತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಅಧಿಕಾರಿ ರವೀಂದ್ರ ಡಿ.ರವರು ಮಾತನಾಡಿ ಪಠ್ಯಕ್ರಮ  ಮಾತ್ರವಲ್ಲದೆ ಬಾಹ್ಯಪ್ರಪಂಚದ ಸತ್ಯಸಂಗತಿಗಳನ್ನು ಹುಡುಕುವಂತಹ ಕೆಲಸ ವಿಜ್ಞಾನದಿಂದ ಸಾಧ್ಯ. ಮಕ್ಕಳು ತಮ್ಮ ಚಿಂತನೆಗಳನ್ನು ಈ ಕಾರ್ಯಗಾರದಲ್ಲಿ ಹಂಚಿಕೊಂಡು ಮುಂದಿನ ಅನ್ವೇಷಣೆಗೆ ಸಿದ್ಧರಾಗಬೇಕು ಎಂದು ಹೇಳಿದರು.
 ಸಂಪನ್ಮೂಲ ವ್ಯಕ್ತಿಗಳಾಗಿ ಐರಿಸ್ ನ ಸಂಯೋಜಕಿ ಅಣ್ಣಾ ಮುರುಗನ್ ಹಾಗೂ ಪುತ್ತೂರು ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ರವರು ಆಗಮಿಸಿದ್ದರು. ವೇದಿಕೆಯಲ್ಲಿ ಪೆರ್ನೆ  ಶ್ರೀರಾಮ ಕೃಷ್ಣ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಸತ್ಯನಾರಾಯಣ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ. ಶೆಟ್ಟಿ ಉಪಸ್ಥಿತರಿದ್ದರು. ಮಾಣಿಬಾಲವಿಕಾಸಬಾಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ಜೊತೆ ಪೆರ್ನೆ ಶ್ರೀರಾಮ  ಪ್ರೌಢಶಾಲೆ ಹಾಗೂ ಮಾಣಿ ಕರ್ನಾಟಕ ಪ್ರೌಢಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.  
ವಿಜ್ಞಾನ ವಿಚಾರಗೋಷ್ಠಿ  ಸ್ಪರ್ಧೆಯಲ್ಲಿ ವಿಜೇತರಾದ ಬಾಲವಿಕಾಸ ಆಂಗ್ಲ ಮಾದ್ಯಮ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಮಕ್ಕಳಿಗೆ ಐರಿಸ್ ತರಬೇತಿ ಕಾರ್ಯಗಾರ ನಡೆಯಿತು. ವಿದ್ಯಾರ್ಥಿನಿ ಮಾನ್ಯ ಆರ್ ಶೆಟ್ಟಿ ಪ್ರಾರ್ಥಿಸಿದರು. ಸಹ ಶಿಕ್ಷಕಿ ರಶ್ಮಿ ಫೆರ್ನಾಂಡಿಸ್ ಸ್ವಾಗತಿಸಿ, ವಂದಿಸಿ ಕಾರ್ಯಕ್ರಮ ನಿರೂಪಿಸಿದರು. 

LEAVE A REPLY

Please enter your comment!
Please enter your name here