ಐತ್ತೂರು: ಚದುರಂಗ ಅಭಿಯಾನ ಕಾರ್ಯಕ್ರಮ

0

ಪುತ್ತೂರು: ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯತಿಯ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಸರಕಾರದ ಯೋಜನೆಯಂತೆ ಗ್ರಾಮೀಣ ಮಕ್ಕಳ ಭೌತಿಕ ಸಾಮರ್ಥ್ಯ ಹೆಚ್ಚಿಸುವ ಚದುರಂಗ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ಚೆಸ್ ಸ್ಪರ್ಧೆ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ಯಾಮಲಾ, ಉಪಾಧ್ಯಕ್ಷ ರೋಹಿತ್ ಕುಮಾರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಾತಾ ಕೆ, ಗ್ರಾಮ ಪಂಚಾಯತ್ ಸದಸ್ಯೆ ಜಯಲಕ್ಷ್ಮಿ, ಸೈಂಟ್ ಆನ್ಸ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಅರುಣ್ ಕುಮಾರ್ ಹಾಗೂ ಗುಡ್ ಶೆಫರ್ಡ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಹರಿಣಾಕ್ಷಿ ಉಪಸ್ಥಿತರಿದ್ದರು. ಅರುಣ್ ಕುಮಾರ್ ತೀರ್ಪುಗಾರರಾಗಿ ಸಹಕರಿಸಿದರು. ಗ್ರಾಮ ಪಂಚಾಯತ್ ಕಾವೇರಿ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ. ಜ್ಞಾನ ಸೆಲ್ವಿ ಪ್ರಾರ್ಥಿಸಿದರು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಜಯಲಕ್ಷ್ಮಿ ಸಹಕರಿಸಿದರು. ಗ್ರಂಥಾಲಯ ಮೇಲ್ವಿಚಾರಕರಾದ ವೇಜಶ್ರೀ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ ವಂದಿಸಿದರು.

ಚದುರಂಗ ಆಟದಲ್ಲಿ 26 ಮಕ್ಕಳು ಭಾಗವಹಿಸಿದ್ದರು. ಪ್ರಥಮ ಸ್ಥಾನವನ್ನು ಅಕ್ಷಯ್ ಸುಬ್ರಹ್ಮಣ್ಯ, ದ್ವಿತೀಯ ಸ್ಥಾನವನ್ನು ಕೆ. ನಿರಂಜನ್ ಮತ್ತು ತೃತೀಯ ಸ್ಥಾನವನ್ನು ಸ್ವಸ್ತಿಕ್ ಬಿ. ಪಡೆದುಕೊಂಡರು.

LEAVE A REPLY

Please enter your comment!
Please enter your name here