ತೆಂಕಿಲ ವಿವೇಕಾನಂದ ಆ.ಮಾ.ಶಾಲೆಯ ವಿದ್ಯಾರ್ಥಿಗಳು ಕರಾಟೆ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

0

ಪುತ್ತೂರು : ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ಪುತ್ತೂರು ಇದರ ಆಶ್ರಯದಲ್ಲಿ ಜು.22ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

14 ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಾಪ್ತ್ ಅರ್.ಎನ್(8ನೇ ತರಗತಿ) ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ವಂಶಿ ರೈ(6ನೇ ತರಗತಿ) ತೃತೀಯ ಸ್ಥಾನ, 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಶಿವ ಕುಮಾರ್(10ನೇ ತರಗತಿ) ಪ್ರಥಮ, ಪೃಥ್ವಿರಾಜ್ ಪ್ರಭು (10ನೇ ತರಗತಿ) ಪ್ರಥಮ ಸ್ಥಾನ, ಲಿಖಿತ್ ಪಿ. (10ನೇ ತರಗತಿ) ಪ್ರಥಮ ಸ್ಥಾನ, ಪ್ರಮಥ.ಎಂ ಭಟ್(9 ನೇ ತರಗತಿ) ಪ್ರಥಮ ಸ್ಥಾನ, ಮಹಮ್ಮದ್ ರಿಹಾನ್ (9ನೇ ತರಗತಿ) ಅದ್ದೈತ್ ಶರ್ಮ(ಹತ್ತನೇ ತರಗತಿ) ಪ್ರಥಮ ಸ್ಥಾನ, ವಿಶಾಲ್ ಪಿ. (9ನೇ ತರಗತಿ) ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ತೃಪ್ತಿ ಎ.ಕೆ (10ನೇ ತರಗತಿ) ಪ್ರಥಮ ಸ್ಥಾನ ಗಳಿಸಿದ್ದಾರೆ.

ಇವರು ಆ.6ರಂದು ಬೆಳ್ತಂಗಡಿ ತಾಲೂಕಿನ ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಇಲ್ಲಿ ನಡೆಯುವ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯಗುರು ಸತೀಶ್ ಕುಮಾರ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here