ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

0

ಪುತ್ತೂರು: ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಮತ್ತು ಒಕ್ಕಲಿಗ ಗೌಡ ಮಹಿಳಾ ಸಂಘದ ಜಂಟಿ ಆಶ್ರಯದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘ ಮತ್ತು ಗೌಡ ಯುವ ಸಂಘ ಮತ್ತು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್‌ನ ಸಹಕಾರದೊಂದಿಗೆ ಆ.5ರಂದು ಬೆಳಿಗ್ಗೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಸಾಮೂಹಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ನಡೆಯಿತು.

 

ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಅಧ್ಯಕ್ಷ ದಿವ್ಯಪ್ರಭಾ ಚಿಲ್ತಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ತೆಂಕಿಲ ವಿವೇಕಾನಂದ ಕಾಲೇಜು ಆಫ್ ಎಜ್ಯುಕೇಶನ್ ಇದರ ಸಹಾಯಕ ಪ್ರಾಧ್ಯಾಪಕಿ ಅನುರಾಧ, ಹಿರೇಬಂಡಾಡಿ ಪ್ರಗತಿಪರ ಕೃಷಿಕೆ ಹೇಮಾವತಿ ಮಠಂದೂರು, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು, ಯುವ ಗೌಡ ಸೇವಾ ಸಂಘದ ಅಧ್ಯಕ್ಷ ನಾಗೇಶ್ ಅವರು ಅತಿಥಿಗಳಾಗಿ ಭಾಗವಹಿಸಿದ್ದರು. ವಸಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಕಾರ್ಯದರ್ಶಿ ಸಂಧ್ಯಾ ಬೈಲಾಡಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಒಕ್ಕಲಿಗ ಮಹಿಳಾ ಗೌಡ ಸಂಘದ ಪ್ರಧಾನ ಕಾರ್ಯದರ್ಶಿ ವಾರಿಜ ಬೆಳಿಯಪ್ಪ ಗೌಡ ಸ್ವಾಗತಿಸಿದರು. ಸಂಧ್ಯಾ ಶಶಿಧರ್ ವಂದಿಸಿದರು. ಒಕ್ಕಲಿ ಸ್ವಸಹಾಯ ಸಂಘದ ಮೇಲ್ಚಿಚಾರಕಿ ಸುಮಲತಾ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here