ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅತ್ಯುತ್ತಮ ಸಾಧನೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಪ್ರಶಸ್ತಿ ಪ್ರದಾನ

0

ಪುತ್ತೂರು: ಪುತ್ತೂರು ಕಡಬ ಸೇರಿ ಒಟ್ಟು 7 ಶಾಖೆಗಳನ್ನು ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಪುತ್ತೂರು ಇದರ ವಿಶೇಷ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಮಂಗಳೂರಿನ ಜಿಲ್ಲಾ ಬ್ಯಾಂಕಿನ ಉತ್ಕೃಷ್ಟ ಸಹಕಾರಿ ಸೌಧದಲ್ಲಿ ಆ.5ರಂದು ನಡೆದ ಬ್ಯಾಂಕ್‌ನ ಮಹಾಸಭೆಯಲ್ಲಿ ಈ ಪ್ರಶಸ್ತಿಯನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಮ್.ಎನ್.ರಾಜೇಂದ್ರ ಕುಮಾರ್ ಅವರು ಪ್ರದಾನ ಮಾಡಿದರು. ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕರಾದ ರಾಮಕೃಷ್ಣ ಗೌಡ ಕರ್ಮಲ, ಲೋಕೇಶ್ ಚಾಕೋಟೆ, ಆಂತರಿಕ ಲೆಕ್ಕಪರಿಶೋಧಕ ಶ್ರೀಧರ್ ಕಣಜಾಲು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಬ್ಯಾಂಕ್‌ನ ನಿರ್ದೇಶಕರೂ ಮತ್ತು ಕೆಎಂಎಫ್ ಉಪಾಧ್ಯಕ್ಷರೂ ಆಗಿರುವ ಎಸ್.ಬಿ.ಜಯರಾಮ ರೈ ಬಳಜ್ಜ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here