ಪುತ್ತೂರು: ರೈಲು ನಿಲ್ದಾಣದ ಬಳಿಯಿರುವ ಶ್ರೀ ಮಹಾಲಕ್ಮೀ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯು ಆ.೨ರಂದು ನಡೆಯಿತು.
ಗಂಟೆಗೆ ಕಲಶಪ್ರತಿಷ್ಠೆ, ಸಂಕಲ್ಪ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ಪೂಜೆ ಮಾಡಿಸುವವರಿಗೆ ಅರಸಿನ, ಕುಂಕುಮ, ಬಲೆ, ರವಿಕೆ ಕನ, ನೂಲುಗಳನ್ನು ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ ವಿತರಿಸಲಾಯಿತು.ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಧರ್ಮದರ್ಶಿ ಐತ್ತಪ್ಪ ಸಪಲ್ಯ ಉಪಸ್ಥಿತರಿದ್ದರು. ನೂರಾರು ಮಂದಿ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.