ಕೆಸಿಎಫ್‌ನಿಂದ ಮಹಮ್ಮದ್ ಹಾಜಿ ಕುಕ್ಕುವಳ್ಳಿಯವರಿಗೆ ಸಮಾಜ ಸೇವಾ ಪ್ರಶಸ್ತಿ-ಸೌದಿ ಅರೇಬಿಯಾದ ಬುರೈದಾದಲ್ಲಿ ಪ್ರಶಸ್ತಿ ಪ್ರದಾನ

0

ಪುತ್ತೂರು: ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆಸಿಎಫ್) ಅಲ್ ಖಾಸ್ಸಿಮ್ ಝೋನ್ ವತಿಯಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ನೀಡಲ್ಪಡುವ ಉತ್ತಮ ಸಮಾಜ ಸೇವಾ ಅವಾರ್ಡ್‌ಗೆ ಉದ್ಯಮಿ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಭಾಜನರಾಗಿದ್ದು ಸೌದಿ ಅರೇಬಿಯಾದ ಬುರೈದಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವಾರ್ಡ್ ಸ್ವೀಕರಿಸಿದ್ದಾರೆ.

ಮಹಮ್ಮದ್ ಹಾಜಿ ಕುಕ್ಕುವಳ್ಳಿಯವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಧಾರ್ಮಿಕವಾಗಿ ಸಲ್ಲಿಸಿದ ಅದಮ್ಯ ಸೇವೆಯನ್ನು ಪರಿಗಣಿಸಿ ಈ ಅವಾರ್ಡ್ ನೀಡಲಾಗಿದೆ.

ಉದ್ಯಮಿಯಾಗಿರುವ ಮಹಮ್ಮದ್ ಹಾಜಿ ಕುಕ್ಕುವಳ್ಳಿಯವರು ಸೂರಿಲ್ಲದವರಿಗೊಂದು ಆಸರೆ ಯೋಜನೆ ಮೂಲಕ ಹಲವು ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಹಾಗೂ ಮನೆ ದುರಸ್ತಿ ಕಾರ್ಯವನ್ನು ಮಾಡಿಕೊಟ್ಟು ಮಾನವೀಯತೆ ಮೆರೆದಿದ್ದರು. ಪ್ರಸ್ತುತ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ದ.ಕ ಜಿಲ್ಲಾಧ್ಯಕ್ಷರಾಗಿರುವ ಇವರು ಪುತ್ತೂರು-ಪಾಣಾಜೆ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾಗಿದ್ದಾರೆ. ಅಲ್ಲದೇ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.

LEAVE A REPLY

Please enter your comment!
Please enter your name here