ಚಿತ್ರ:ಪದ್ಮಾ ಪುತ್ತೂರು
ಪುತ್ತೂರು: ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ಆಶ್ರಯದಲ್ಲಿ ಆ. 5ರಂದು ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಜರಗಿತು. ಮಂಡಳಿ ಅಧ್ಯಕ್ಷೆ ಇಂದಿರಾ ಪುರುಷೋತ್ತಮ ಆಚಾರ್ಯ ದಂಪತಿ ನೇತೃತ್ವ ವಹಿಸಿದ್ದರು. ಇದೇ ಸಂದರ್ಭ ಮಂಡಳಿ ಸದಸ್ಯೆಯರಿಂದ ಭಜನೆ ನಡೆಯಿತು. ಆಗಮಿಸಿದ ಸಮಾಜ ಬಾಂಧವರು ಪೂಜೆಯಲ್ಲಿ ಪಾಲ್ಗೊಂಡರು. ಮಂಡಳಿ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.