ಪುತ್ತೂರು: ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸವಣೂರು ಉಪಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ವಾಗೀಶ್ವರಿ ಜು.31ರಂದು ಸೇವಾ ನಿವೃತ್ತಿ ಹೊಂದಿದರು.
ಇವರು ಆರೋಗ್ಯ ಇಲಾಖೆಯಲ್ಲಿ 34 ವರ್ಷಗಳ ಕಾಲ ಆರೋಗ್ಯ ಸುರ್ಷಾಧಿಕಾರಿಯಾಗಿ ಸೇವೆ ಸಲ್ಲಿಸಿದರು. 1988ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಉಪಕೇಂದ್ರದಲ್ಲಿ ಸೇವೆಗೆ ಸೇರಿದರು. 1990 ರಿಂದ 93ರ ತನಕ ಪ್ರಾಥಮಿಕ ಆರೋಗ್ಯ ಕೇಂದ್ರ ತಿಂಗಳಾಡಿ, 1993ರಿಂದ 96ರ ತನಕ ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ, 1996ರಿಂದ 2022ರ ಜು.31ರ ತನಕ ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸವಣೂರು ಉಪಕೇಂದ್ರದಲ್ಲಿ ಸೇವೆ ಸಲ್ಲಿಸಿದರು. ಇವರು ಪತಿ ಕ್ಯಾಂಪ್ಕೋ ಸಂಸ್ಥೆಯ ನಿವೃತ್ತ ಉದ್ಯೋಗಿ ಪದ್ಮನಾಭ ಎಂ., ಮಕ್ಕಳಾದ ಪ್ರಜ್ಞಾ ಎಂ, ಪಲ್ಲವಿ ಎಂ. ರವರೊಂದಿಗೆ ಕೆಮ್ಮಿಂಜೆ ಗ್ರಾಮದ ಮರೀಲ್ನಲ್ಲಿ ವಾಸ್ತವ್ಯ ಹೊಂದಿದ್ದಾರೆ.