ಪುತ್ತೂರು: ಆರೋಗ್ಯ ಇಲಾಖೆಯಲ್ಲಿ 34 ವರ್ಷಗಳ ಕಾಲ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ವಾಗೀಶ್ವರಿ ರವರಿಗೆ ಜುಲೈ 30 ರಂದು ಬೀಳ್ಕೊಡುಗೆ ಕಾರ್ಯಕ್ರಮವು ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಸಭಾಧ್ಯಕ್ಷತೆಯನ್ನು ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತ್ ಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಸರ್ವೆ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಮಿತ, ಈಶ್ವರಮಂಗಲ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಿಖಿಲ್, ತಿಂಗಳಾಡಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭವ್ಯ, ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಯಶೋಧ, ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಜೆಸಿಂತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇತರ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದು ಶುಭಹಾರೈಸಿದರು. ಜೆಸಿಂತಾ ಸ್ವಾಗತಿಸಿ, ರಶ್ಮಿ ವಂದಿಸಿದರು, ಲೋಕೇಶ್ ತಂಟೆಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು