ಪುತ್ತೂರು: ಹಿರಿಯ ನ್ಯಾಯವಾದಿ ಎನ್.ಎ ಸದಾಶಿವ ರೈ ಅವರಿಗೆ ಪುತ್ತೂರು ವಕೀಲರ ಸಂಘದಿಂದ ನ್ಯಾಯಾಲಯದ ಸಂಕೀರ್ಣದಲ್ಲಿರುವ ಪರಾಶರ ಹಾಲ್ ನಲ್ಲಿ ಆ.6ರಂದು ಶ್ರದ್ದಾಂಜಲಿ ಸಲ್ಲಿಸಲಾಯಿತು.
ಹಿರಿಯ ನ್ಯಾಯವಾದಿ ರಾಮ್ಮೋಹನ್ ರಾವ್, ಎನ್.ಕೆ.ಜಗನ್ನಿವಾಸ ರಾವ್, ಗೌರಿಶಂಕರ್ ಶಾನ್ಬೋಗ್, ಅರಂಥನಡ್ಕ ಬಾಲಕೃಷ್ಣ ರೈ ಅವರು ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಓಂಕಾರಪ್ಪ, ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ನ್ಯಾಯಿಕ ದಂಡಾಧಿಕಾರಿ ಗೌಡ ಆರ್ ಪಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಅರ್ಚನಾ, ಅಪರ ಸಿವಿಲ್ ನ್ಯಾಯಾಧೀಶ ಮತ್ತು ಜೆಎಮ್ಎಫ್ಸಿ ಶಿವಣ್ಣ ಹೆಚ್.ಆರ್, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಜೆಎಮ್ಎಫ್ಸಿ ಯೋಗೀಂದ್ರ ಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ, ಪ್ರಧಾನ ಕಾರ್ಯದರ್ಶಿ ಚಿನ್ಮಯ್ ರೈ, ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕಕ್ವೆ, ಜೊತೆ ಕಾರ್ಯದರ್ಶಿ ಸೀಮಾ ನಾಗರಾಜ್, ಕೋಶಾಧಿಕಾರಿ ಶ್ಯಾಮ್ ಪ್ರಸಾದ್ ಕೈಲಾರ್ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.