ಸವಣೂರು : ಇಲ್ಲಿನ ಚಂದ್ರನಾಥ ಬಸದಿಯ ಸಮೀಪದ ಗದ್ದೆಯಲ್ಲಿ ಸವಣೂರಿನ ಸಮಾನ ಮನಸ್ಕ ಯುವಕರ ತಂಡ ಅಂಬಾ ಬ್ರದರ್ಸ್ ಇದರ ವತಿಯಿಂದ ಎರಡನೇ ವರ್ಷದ ಗದ್ದೆ ಬೇಸಾಯಕ್ಕೆ ಆ.6ರಂದು ಚಾಲನೆ ನೀಡಲಾಯಿತು.
ಅಂಬಾ ಬ್ರದರ್ಸ್ ತಂಡವು ಈಗಾಗಲೇ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇದೀಗ ಹಡೀಲು ಬಿದ್ದ ಗದ್ದೆಯಲ್ಲಿ ಭತ್ತದ ಬೇಸಾಯಕ್ಕೆ ಮುಂದಾಗಿದ್ದು ಈ ವಿನೂತನ ಕಾರ್ಯಕ್ರಮ ಅಂಬಾ ಗದ್ದೆಗಿಳಿಯೋಣ ಬಾ ಕಾರ್ಯಕ್ರಮಕ್ಕೆ ಸವಣೂರು ಬಸದಿಯ ಆವರಣದ ಗದ್ದೆಯಲ್ಲಿ ಗದ್ದೆಯ ಮಾಲಕ ನ್ಯಾಯವಾದಿ ನಿರ್ಮಲ ಕುಮಾರ್ ಜೈನ್ ಚಾಲನೆ ನೀಡಿದರು.
ಚಾಲನೆಗೂ ಮುನ್ನ ಬಸದಿಯ ಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಅರ್ಚಕ ಶ್ರೇಯಾಂಸ ಕುಮಾರ ಇಂದ್ರ ಅವರು ಪ್ರಾರ್ಥನೆ ಸಲ್ಲಿಸಲಾಯಿತು.
ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸವಣೂರು ಸಿಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ., ಸವಣೂರು ಗ್ರಾ.ಪಂ.ಸದಸ್ಯ ಗಿರಿಶಂಕರ ಸುಲಾಯ, ಸಾಮಾಜಿಕ ಮುಂದಾಳು ರಾಮಕೃಷ್ಣ ಪ್ರಭು, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಮಂಜುನಾಥನಗರ ವಿವೇಕಾನಂದ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ, ವೆಂಕಪ್ಪ ಗೌಡ ಅಡೀಲು, ಗ್ರಾ.ಪಂ.ಮಾಜಿ ಸದಸ್ಯ ಸತೀಶ್ ಬಲ್ಯಾಯ,ಉಮೇಶ್ ಕರ್ಕೇರ,ಜಯರಾಮ ರೈ ಮೂಡಂಬೈಲು, ಶಿವರಾಮ ಗೌಡ ಮೆದು,ಅಂಬಾ ಬ್ರದರ್ಸ್ ತಂಡದ ಬಾಲಚಂದ್ರ ರೈ ಕೆರೆಕ್ಕೋಡಿ, ರಾಜ್ ದೀಪಕ್ ಶೆಟ್ಟಿ ಮಠ, ಕೀರ್ತನ್ ಮೇಲಿನಮುಗ್ಗ, ನಿಶ್ಚಲ್ ಎಂ ರೈ,ಆದರ್ಶ ಜೆ.ರೈ, ಅಭಿಷೇಕ್ ಜೆ.ರೈ. ಸುಶಾಂತ್ ನಾಯ್ಕ್, ನಿಭಾ ಬಿ. ರೈ ಮೊದಲಾದವರಿದ್ದರು.