ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಹಾಸಭೆ: ಪೆರ್ನೆ ಸಹಕಾರ ಸಂಘಕ್ಕೆ 16ನೇ ಬಾರಿಗೆ ಶೇಕಡಾ 100 ವಸೂಲಾತಿ ಪ್ರಶಸ್ತಿ

0

ಉಪ್ಪಿನಂಗಡಿ: ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಗಳೂರು ಇದರ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಪೆರ್ನೆ ಸಹಕಾರ ವ್ಯವಸಾಯಿಕ ಸಂಘ ಸತತ 16ನೇ ಬಾರಿಗೆ ಶೇಕಡಾ 100 ಸಾಲ ವಸೂಲಾತಿ ಸಾಧನೆ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಪ್ರಶಸ್ತಿಯನ್ನು ಸಂಘದ ಅಧ್ಯಕ್ಷ ಎಸ್. ತೋಯಜಾಕ್ಷ ಶೆಟ್ಟಿ ಮತ್ತು ಮುಖ್ಯ ಕಾರ‍್ಯನಿರ್ವಹಣಾಧಿಕಾರಿ ಪುಷ್ಪಾ ಡಿ. ಪಡೆದುಕೊಂಡರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬೇಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ಬಾಲ್ಯೋಟ್ಟು, ಎಸ್.ಬಿ. ಜಯರಾಮ ರೈ, ಟಿ.ಜಿ. ರಾಜಾರಾಮ್ ಭಟ್, ನಿರಂಜನ, ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಪೆರ್ನೆ ಸಹಕಾರ ವ್ಯವಸಾಯಿಕ ಸಂಘದ ನಿರ್ದೇಶಕರಾದ ಸುನಿಲ್ ನೆಲ್ಸನ್ ಪಿಂಟೋ, ವಿಟ್ಲ ವಲಯ ಸುಪರ್‌ವೈಸರ್ ಯೋಗೀಶ್ ಹೆಚ್. ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here