ಪುತ್ತೂರು: ಶ್ರೀ ಗೌರಿ ಮಹಿಳಾ ಮಂಡಳಿ ಸರ್ವೆ ವತಿಯಿಂದ ಕಲ್ಲಮ ಶ್ರೀ ಗುರು ರಾಘವೇಂದ್ರ ಮಠದ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಮಠದ ಸಭಾಂಗಣದಲ್ಲಿ ನಡೆಯಿತು. ಮಠದ ಅರ್ಚಕರಾದ ಶ್ರೀ ಕೃಷ್ಣ ಅಡಿಗ ಕಲ್ಲಮ ಅವರು ಪೂಜಾ ವಿಧಿಗಳನ್ನು ನೆರವೇರಿಸಿದರು. ಭಜನಾ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣೆ ನಡೆಯಿತು.