ಆಲಂಕಾರು: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರೋತ್ಸಾಹಕ ಪ್ರಶಸ್ತಿಗೆ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಯ್ಕೆಗೊಂಡಿದ್ದು, ಆ 5ರಂದು ರಂದು ಮಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಉತ್ಕೃಷ್ಟ ಸೌಧದಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಧರ್ಮಪಾಲ ರಾವ್ ಕಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮಪ್ಪ ಗೌಡ.ಕೆ ಅವರಿಗೆ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.
ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಾಹಾರದಲ್ಲಿ ಗಣನೀಯ ಸಾಧನೆ ಮಾಡಿದ್ದು ಈ ಸಹಕಾರಿ ಸಂಘವು ಜಿಲ್ಲೆಯಲ್ಲೆ ಗುರುತಿಸಲ್ಪಡುವ ಸಂಘವಾಗಿದೆ. ಇಲ್ಲಿಗೆ ನಬಾಡ್೯ ಬ್ಯಾಂಕ್ ಅಧ್ಯಯನ ತಂಡಗಳು ಅಧ್ಯಯನಕ್ಕೆ ಬರುತ್ತಿದ್ದು ಈ ಸಹಕಾರಿ ಸಂಘದಲ್ಲಿ ಮಾಡುತ್ತಿರುವ ಕಾರ್ಯಚಟುವಟಿಕೆಗಳನಚನು ಅನುಷ್ಠಾನ ಮಾಡಲು ಅಧ್ಯಯನ ತಂಡಗಳು ಬರುತ್ತಿರುವುದು ಇಲ್ಲಿಯ ವಿಶೇಷವಾಗಿದೆ. ಪ್ರಶಸ್ತಿಯನ್ನು ಪ್ರದಾನ ಸಂದರ್ಭದಲ್ಲಿ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ ಬಳ್ಳಜ್ಜ, ಸಹಕಾರ ಸಂಘಗಳ ಉಪ ನಿಬಂಧಕರಾದ ಪ್ರವೀಣ್ ನಾಯಕ್, ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಬ್ಯಾಂಕಿನ ಉಪಾಧ್ಯಕ್ಷ ಪ್ರದೀಪ್ ರೈ ಮನವಳಿಕೆ, ನಿರ್ದೇಶಕರುಗಳಾದ ಶೇಷಪತಿ ರೈ ಗುತ್ತುಪಾಲು, ರಾಮಚಂದ್ರ ಏಣಿತ್ತಡ್ಕ, ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ರೈ ಮನವಳಿಕೆ ಉಪಸ್ಥಿತರಿದ್ದರು. ಸಂಘದ ಬೆಳವಣಿಗೆಗೆ ಸದಾ ಪ್ರೋತ್ಸಾಹ ನೀಡುತ್ತಿರುವ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ!.ಎಂ.ಎನ್ ರಾಜೇಂದ್ರಕುಮಾರ್,ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಮತ್ತು ಎಸ್.ಬಿ ಜಯರಾಮ ರೈ ಯವರಿಗೆ ಸಂಘದ ಅಧ್ಯಕ್ಷರಾದ ಧರ್ಮಪಾಲ ರಾವ್ ಕಜೆ,ಉಪಾಧ್ಯಕ್ಷರಾದ ಪ್ರದೀಪ್ ರೈ ಮನವಳಿಕೆ ಹಾಗು ನಿರ್ದೇಶಕರು ಕೃತಜ್ಞತೆ ಸಲ್ಲಿಸಿದ್ದಾರೆ.