ಪುತ್ತೂರು : ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಹಾಗೂ ತಾಲೂಕು ಪಂಚಾಯತ್ ಪುತ್ತೂರು ಇವರು ಆಯೋಜಿಸಿದ ಓದುವ ಬೆಳಕು ಕಾರ್ಯಕ್ರಮದಡಿ ನಡೆದ ತಾಲೂಕು ಮಟ್ಟದ ಚದುರಂಗ ಆಟ ಆಡೋಣ ಅಭಿಯಾನದಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ನೆಟ್ಟಣಿಗೆ ಮುಡ್ನೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮಹಮ್ಮದ್ ಸಾಬೀತ್ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯೋಪಾಧ್ಯಾಯರಾದ ಪ್ರೇಮ್ಕುಮಾರ್ ತಿಳಿಸಿರುತ್ತಾರೆ.