ಪುತ್ತೂರು:ಬ್ರಹ್ಮ ಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಮತ್ತು ಬಿಲ್ಲವ ಮಹಿಳಾ ವೇದಿಕೆ ವತಿಯಿಂದ ವರ ಮಹಾಲಕ್ಷ್ಮೀ ವ್ರತ ಪೂಜೆ ಕಾರ್ಯಕ್ರಮ ಆ.5ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಗಿತು. ಸಾಯಿ ಶಾಂತಿ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿತು. ಗುರುಮಂದಿರದ ಅರ್ಚಕರು ಸಹಕರಿಸಿದ್ರು.
ಪೂಜೆಯಲ್ಲಿ ನೂರಾರು ಮಂದಿ ಭಕ್ತಾಧಿಗಳು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕೆಡೆಂಜಿ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಾರ್ಯನಿರ್ವಹಣಾಧಿಕಾರಿ ಹೊನ್ನಪ್ಪ ಪೂಜಾರಿ ಕೈಂದಾಡಿ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಚಂದ್ರಕಲಾ ಮುಕ್ವೆ ಸೇರಿದಂತೆ ಸಂಘದ ಮಾಜಿ ಅಧ್ಯಕ್ಷರುಗಳು, ಸಂಘದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.