ಕಾಣಿಯೂರು: ತಾಲೂಕಿನಾದ್ಯಂತ ಕಳೆದರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಚಾರ್ವಾಕ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಆವರಣ ಗೊಡೆ ಕುಸಿದುಬಿದ್ದು ರೂ 2ಲಕ್ಷ ನಷ್ಟವುಂಟಾಗಿದೆ. ಘಟನಾ ಸ್ಥಳಕ್ಕೆ ಕಾಣಿಯೂರು ಗ್ರಾ. ಪಂ ಅಧ್ಯಕ್ಷೆ ಲಲಿತಾ ದರ್ಖಾಸು, ಉಪಾಧ್ಯಕ್ಷ ಗಣೇಶ್ ಉದನಡ್ಕ ಭೇಟಿ ನೀಡಿ ಪರಿಶೀಲಿಸಿ ದುರಸ್ಥಿಗಾಗಿ ತಾಲೂಕು ಪಂಚಾಯತ್ ಗೆ ಪಂಚಾಯತ್ ವತಿಯಿಂದ ಮನವಿ ಮಾಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ರಾಮಣ್ಣ ಗೌಡ ಪೊನ್ನೆತ್ತಡಿ, ನಿಕಟ ಪೂರ್ವ ಅಧ್ಯಕ್ಷ ಗೋಪಾಲಕೃಷ್ಣ ಬಾರೆಂಗಳ, ಮುಖ್ಯಗುರು ಪಾರ್ವತಿ ಹಾಗೂ ಎಸ್. ಡಿ. ಎಂ. ಸಿ ಸದಸ್ಯರು ಉಪಸ್ಥಿತರಿದ್ದರು.