ಪುತ್ತೂರು; ಸಂಪ್ಯ ನವಚೇತನ ಯುವಕ ಮಂಡಲದ ವತಿಯಿಂದ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ 40ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯು ಆ.7ರಂದು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆಗೊಂಡಿತು.
ಉದ್ಯಮಿಗಳು, ಅಕ್ಷಯ ಕಾಲೇಜಿನ ಚೆಯರ್ ಮೆನ್ ಆಗಿರುವ ಜಯಂತ ನಡುಬೈಲು ಆಮಂತ್ರಣ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಕೋವಿಡ್ ನಿಂದಾಗಿ ಕಳೆದ ಎರಡು ವರ್ಷಗಳಿಂದ ಸರಳವಾಗಿ ನಡೆದ ಗಣೇಶೋತ್ಸವವವು ಈ ಬಾರಿ ಸಂಭ್ರಮ, ಸಡಗರದಿಂದ ನಡೆಯಲಿ ಎಂದು ಶುಭಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಉತ್ಸವ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ನವಚೇತನ ಯುವಕ ಮಂಡಲದ ಅಧ್ಯಕ್ಷ ವಿಜಯ ಬಿ.ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವಕ ಮಂಡಲದ ಉಪಾಧ್ಯಕ್ಷ ಮಂಜಪ್ಪ ಗೌಡ ಬೈಲಾಡಿ, ಮಾಜಿ ಅಧ್ಯಕ್ಷರಾದ ದೇವಯ್ಯ ಗೌಡ, ನಾಗೇಶ್ ಸಂಪ್ಯ, ಸೀತಾರಾಮ ಶೆಟ್ಟಿ ಕಂಬಳತ್ತಡ್ಡ, ಲಕ್ಷ್ಮಣ್ ಬೈಲಾಡಿ, ರಮಾನಾಥ ಗೌಡ ಬೈಲಾಡಿ, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಉಮೇಶ್ ಎಸ್.ಕೆ. ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಜಯಂತ ಶೆಟ್ಟಿ ಕಂಬಳತ್ತಡ್ಡ ವಂದಿಸಿದರು.