ವಿಟ್ಲ: ಕೂಲಿ ಕಾರ್ಮಿಕ ವ್ಯಕ್ತಿಯೋರ್ವರ ಮೃತದೇಹ ವಿಟ್ಲ ನಾಲ್ಕು ಮಾರ್ಗ ಸಮೀಪದ ಚರಂಡಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕು ವಿಟ್ಲಕಸಬ ಗ್ರಾಮದ ಚಂದಳಿಕೆ ನಿವಾಸಿ ಪದ್ಮನಾಭ ನಾಯ್ಕ್ (55 ವ.) ಮೃತ ದುರ್ದೈವಿ. ಪದ್ಮನಾಭ ನಾಯ್ಕ್ ರವರ ಮೃತದೇಹ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ಸಮೀಪದ ರಸ್ತೆ ಬದಿಯ ಚರಂಡಿಯಲ್ಲಿ ಕುಸಿದುಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ವಿಟ್ಲ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಈ ಬಗ್ಗೆ ಮೃತರ ಪುತ್ರ ಉದಯರವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.