ಪುತ್ತೂರು ತಾಲೂಕು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘವು ಸತತವಾಗಿ 4 ನೇ ಬಾರಿ ಅತ್ಯುತ್ತಮ ಸಹಕಾರಿ ಸಂಘವೆಂದು ಪ್ರಶಸ್ತಿ ಗೆ ಬಾಜನವಾಗಿದ್ದು, ದ ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಮಹಾಸಬೆಯ ಸಮಾರಂಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರಿ ರತ್ನ ಡಾ : ಎಂ ಎನ್ ರಾಜೇಂದ್ರ ಕುಮಾರ್ ರವರು ಅತ್ಯುತ್ತಮ ಸಾಧನೆಗೈದ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಅಲಿ ಹಾಗೂ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳಾದ ಶ್ರೀಮತಿ ಜಯಂತಿ ಭಾಸ್ಕರ್ ರವರಿಗೆ ಪ್ರಶಸ್ತಿ ನೀಡಿ, ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ ಬಿ ಜಯರಾಮ್ ರೈ, ಸದಾಶಿವ ಉಳ್ಳಾಲ್, ದೇವಿ ಪ್ರಸಾದ್ ಶೆಟ್ಟಿ ಬೆಳಪು, ಸಹಕಾರಿ ಇಲಾಖೆಯ ಜಿಲ್ಲಾ ಉಪ ನಿಬಂಧಕರಾದ ಪ್ರವೀಣ್ ಕುಮಾರ್, ಜಿಲ್ಲಾ ಸಹಕಾರಿ ಯುನಿಯನ್ನಿನ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಸಹಿತ ಹಲವಾರು ಸಹಕಾರಿ ಮುಖಂಡರು ಉಪಸ್ಥಿತರಿದ್ದರು