ಕೌಡಿಚ್ಚಾರು ಸಿ.ಆರ್.ಸಿ ಕಾಲೋನಿ ನಿವಾಸಿ ದೇವರಾಜ್ ಹೃದಯಾಘಾತದಿಂದ ನಿಧನ

0

ಪುತ್ತೂರು: ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಿ.ಆರ್.ಸಿ ಕಾಲೋನಿ ನಿವಾಸಿ ದೇವರಾಜ್ (63ವ ) ಅ 7 ರಂದು ಹೃದಯಾಘಾತದಿಂದ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ನಿಧನರಾದರು. ಕಾರ್ಮಿಕ ಮುಖಂಡರಾಗಿ,ಮುತ್ತು ಮಾರಿಯಮ್ಮ ದೇವಸ್ಥಾನದ ಮತ್ತು ರಾಮಕೃಷ್ಣ ಭಜನಾ ಮಂದಿರದ ಗೌರವಾಧ್ಯಕ್ಷ ರಾಗಿ ಸೇವೆ ಸಲ್ಲಿಸಿದ ಇವರು ಭಾರತ್ ಬೀಡಿ ಕಾಂಟ್ರಾಕ್ಟ್ ಆಗಿ ನೂರಾರು ಜನರಿಗೆ ಉದ್ಯೋಗ ಕಲ್ಪಿಸಿದ್ದರು.ಮೃತರು ಪತ್ನಿ ರಾಜೇಶ್ವರಿ, ಪುತ್ರರಾದ ಮೋಹನ್ ರಾಜ್ , ರವಿರಾಜ್ ಮತ್ತು ಪುತ್ರಿ ಭಾನುಮತಿ, ಅಳಿಯ, ಸೊಸೆಯಂದಿರು,ಮೊಮ್ಮಕ್ಕಳನ್ನು ಅಗಲಿದ್ದಾರೆ.ಮೃತರ ಮನೆಗೆ ಶಾಸಕ ಸಂಜೀವ ಮಠಂದೂರು, ಪಂಚಾಯತ್ ಅಧ್ಯಕ್ಷೆ ಸೌಮ್ಯ ಬಾಲಸುಬ್ರಮಣ್ಯಂ, ಉಪಾಧ್ಯಕ್ಷ ಸಂತೋಷ್ ಮಣಿಯಾಣಿ, ಪಂಚಾಯತ್ ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕ ಬಂಧುಗಳು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here