ಪುತ್ತೂರು: ಬೊಳುವಾರಿನಲ್ಲಿರುವ ಪ್ರಗತಿ ಪಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಆಯೋಜಿಸಿದ ‘ ಪ್ರಗತಿ ಪರ್ಬ ‘ ಎಂಬ ವಿನೂತನ ತುಳುನಾಡ ಸಂಸ್ಕೃತಿ ಬಿಂಬಿಸುವಂತ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ರಾಮಕುಂಜ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ ತುಳುನಾಡ ಪರಂಪರೆ, ಸಂಸ್ಕೃತಿ, ಆಚರಣೆಗಳ ಪ್ರಾಮುಖ್ಯತೆಯ ಬಗ್ಗೆ ಇಂದಿನ ಜನಾಂಗದವರಿಗೆ ಯಾವ ರೀತಿಯಲ್ಲಿ ಮಯಿಗೂಡಿಸಿಕೊಂಡು ಒಳ್ಳೆಯ ಸಮಾಜವನ್ನು ಕಟ್ಟಬಹುದು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಗತಿ ಹಾಸ್ಪಿಟಲ್ ಎಜುಕೇಷನ್ ಟ್ರಸ್ಟ್ನ ಟ್ರಸ್ಟಿ ಡಾ.ಸುಧಾ ಎಸ್ ರಾವ್ ವಿದ್ಯಾರ್ಥಿಗಳು ನಮ್ಮ ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯ ಮಾಡಬೇಕಾಗಿದೆ ಎಂದರು. ಕಾಲೇಜಿನ ಪ್ರಾಂಶುಪಾಲೆ ಪ್ರೀತಾ ಹೆಗ್ಡೆ ವಿದ್ಯಾರ್ಥಿಗಳ ಎಲ್ಲಾ ಉತ್ತಮ ಕಾರ್ಯಕ್ರಮಗಳಿಗೆ ಕಾಲೇಜು ಸಹಕರಿಸುತ್ತದೆ ಎಂದರು. ವಿದ್ಯಾರ್ಥಿಗಳಾದ ಹರ್ಷಿತಾ ಪ್ರಾರ್ಥಿಸಿದರು. ನಮೃತ ಸ್ವಾಗತಿಸಿದರು, ಸುಶ್ಮಿತಾ ಮತ್ತು ಮೇಘಶ್ರೀ ಆಶಯ ಗೀತೆ ಹಾಡಿದರು, ಶಿಲ್ಪಾ ಶೆಟ್ಟಿ ವಂದಿಸಿದರು, ಶ್ರೀಲತಾ ಮತ್ತು ಮನಸಾ ಕಾರ್ಯಕ್ರಮ ನಿರೂಪಿಸಿದರು.