ಪುತ್ತೂರು:ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದ ದೋಷಗಳ ಪರಿಹಾರಾರ್ಥವಾಗಿ ಮೂರು ದಿನಗಳ ಕಾಲ ನಡೆದ ವಿವಿಧ ವೈಧಿಕ, ಧಾರ್ಮಿಕ ಕಾರ್ಯಕ್ರಮಗಳು ಆ.೭ರಂದು ರುದ್ರಯಾಗ, ಕಲಷಾಭಿಷೇಕಗಳೊಂದಿಗೆ ಸಂಪನ್ನಗೊಂಡಿತು.
ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆ.೪ರಂದು ಸಂಹೆ ಸಪ್ತಸತಿ ಪಾರಾಯಣ, ಆ.೫ರಂದು ಬೆಳಿಗ್ಗೆ ೭ ಗಂಟೆಯಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, 12 ತೆಂಗಿನಕಾಯಿ ಗಣಪತಿ ಹೋಮ, ಚಂಡಿಕಾ ಯಾಗ ಪ್ರಾರಂಭ, ಸರ್ಪಸಂಸ್ಕಾರ, ಮಂಗಳಹೋಮ, ಆಶ್ಲೇಷ ಬಲಿ, ಅಷ್ಟವಟು ಆರಾಧನೆ, ಮಧ್ಯಾಹ್ನ ಚಂಡಿಕಾ ಹವನ ಪೂರ್ಣಾಹುತಿ, ಸುವಾಸಿನೀ ಆರಾಧನೆ, ನಾಗದೇವರಿಗೆ ತಂಬಿಲ, ದೈವಗಳಿಗೆ ತಂಬಿಲ, ಸಂಜೆ ೬ ಗಂಟೆಯಿಂದ ಸುದರ್ಶನ ಹೋಮ, ನರಸಿಂಹ ಹೋಮ, ಬಾಧಾಕರ್ಷಣೆ, ಉಚ್ಛಾಟನೆ, ದುರ್ಗಾಪೂಜೆ, ದಂಪತಿ ಆರಾಧನೆ ನಡೆಯಿತು.
ಆ.6ರಂದು ಬೆಳಿಗ್ಗೆ 12 ತೆಂಗಿನಕಾಯಿ ಹೋಮ, ಗಣಪತಿ ಹೋಮ, ತಿಲಹೋಮ, ಕೂಷ್ಮಾಂಡ ಹೋಮ, ಪದನಾಮ ಹೋಮ, ದ್ವಾದಶ ಮೂರ್ತಿ ಆರಾಧನೆ, ಸಾಯುಜ್ಯ ಪೂಜೆ ಸಂಜೆ ಆ ಗಂಟೆಯಿಂದ ಪ್ರಾಸಾದ ಶುದ್ಧಿ, ವಾಸ್ತುಬಲಿ, ರುದ್ರ ಪಾರಾಯಣ ಕಾರ್ಯಕ್ರಮಗಳು ಜರುಗಿತು.
ಆ.೭ರಂದು ೧೨ ತೆಂಗಿನಕಾಯಿ ಗಣಪತಿ ಹೋಮ, ರುದ್ರಯಾಗ ಪ್ರಾರಂಭ, ಕಲಶಪೂಜೆ, ಮಧ್ಯಾಹ್ನ ರುದ್ರಯಾಗದ ಪೂರ್ಣಾಹುತಿ, ದೇವರಿಗೆ ಕಲಶಾಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಕಾರ್ಯಕ್ರಮಗಳು ಸಂಪನ್ನಗೊಂಡಿತು. ನೂರಾರು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಆ.12 ವರಮಹಾಲಕ್ಷ್ಮೀ ಪೂಜೆ:
ಕ್ಷೇತ್ರದಲ್ಲಿ ಪ್ರತಿವರ್ಷ ನಡೆಯುವ ವರಮಹಾಕ್ಷ್ಮೀ ಪೂಜೆಯು ಆ.12ರಂದು ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ನ ಪ್ರಕಟಣೆ ತಿಳಿಸಿದೆ.