ಪುತ್ತೂರು:ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ನಾವೂರು ಮಹಾಮಾಯಿ ದೇವಳದ ಬಳಿ ಯಾಕೂಬ್ ಎಂಬವರ ಮಗ ಆಬಿದ್(22ವ)ಹಾಗೂ ಬೆಳ್ಳಾರೆ ಗೌರಿ ಹೊಳೆ ಮೊಹಮ್ಮದ್ ಎಂಬವರ ಮಗ ನೌಫಲ್ (28ವ.)ಎಂಬವರನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಬಂಧಿಸಲಾಗಿದೆ.ತನಿಖೆ ಮುಂದುವರಿಯುತ್ತಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.ಹಂತಕರ ಸಹಿತ ಎಲ್ಲ ಆರೋಪಿಗಳ ಮಾಹಿತಿ ಲಭಿಸಿದ್ದು ಬಾಕಿ ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದವರು ಹೇಳಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸವಣೂರಿನ ಝಾಕಿರ್, ಬೆಳ್ಳಾರೆಯ ಶಫೀಕ್, ಬೆಳ್ಳಾರೆ ಪಳ್ಳಿಮಜಲಿನ ಸದ್ದಾಂ ಮತ್ತು ಹ್ಯಾರೀಸ್ ಎಂಬವರನ್ನು ಬಂಧಿಸಲಾಗಿದೆ.ಇದೀಗ ಇಬ್ಬರ ಬಂಧನದೊಂದಿಗೆ ಬಂಧಿತರ ಸಂಖ್ಯೆ 6ಕ್ಕೇರಿದೆ.