ಪುತ್ತೂರು:ದ.ಕ.ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಕೆಲವೊಂದು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಾರಿಗೊಳಿಸಲಾಗಿದ್ದ ರಾತ್ರಿ ನಿರ್ಬಂಧವನ್ನು ಹಿಂತೆಗೆದುಕೊಳ್ಳಲಾಗಿದ್ದು ಆ.೮ರಿಂದ ಅಂಗಡಿ, ಮುಂಗಟ್ಟುಗಳಲ್ಲಿ ಎಂದಿನಂತೆ ವ್ಯವಹಾರ ನಡೆಸಲು ಮತ್ತು ಜನರ ಓಡಾಟಕ್ಕೆ ಅವಕಾಶವಿದೆ ಎಂದು ದ.ಕ.ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ.ಹೇಳಿದ್ದಾರೆ.ಆದರೆ ಸೆಕ್ಷನ್ ೧೪೪ರನ್ವಯ ಜಾರಿಯಲ್ಲಿರುವ ನಿಷೇಧಾಜ್ಞೆ ಆದೇಶ ಆ.೧೪ರ ತನಕ ಮುಂದುವರಿಯಲಿದೆ.ಮದ್ಯದಂಗಡಿಗಳಲ್ಲಿಯೂ ಈ ಹಿಂದಿನಂತೆ ವ್ಯವಹಾರ ನಡೆಸಲು ಅವಕಾಶ ನೀಡಲಾಗಿದೆ.