ಆಲಂಕಾರು: ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘ ತನ್ನ ವ್ಯವಹಾರ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ರೂ.10,000ಮೌಲ್ಯದ ನಗದು ಷೇರು ಸರ್ಟಿಫಿಕೇಟ್ನೊಂದಿಗೆ ‘ಸಾಧನಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಆ.೫ರಂದು ಮಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಠ ಸೌಧದಲ್ಲಿ ನಡೆದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ2021-22ರ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಂಘದ ಅಧ್ಯಕ್ಷರಾದ ನೈಯ್ಯಲ್ಗ ಮುತ್ತಪ್ಪ ಪೂಜಾರಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಲಿಂಗಪ್ಪ ಪೂಜಾರಿ ನೈಯ್ಯಲ್ಗ ಅವರಿಗೆ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇಂದ್ರ ಕುಮಾರ್ರವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಜಯರಾಮ ರೈ ಉಳಜ್ಜ, ಸಹಕಾರ ಸಂಘಗಳ ಉಪ ನಿಬಂಧಕರಾದ ಪವೀಣ ನಾಯಕ್ ಹಾಗೂ ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದ ಉಪಾಧ್ಯಕ್ಷರಾದ ವಸಂತ ಪೂಜಾರಿ ಬದಿಬಾಗಿಲು, ನಿಕಟಪೂರ್ವ ಅಧ್ಯಕ್ಷರೂ, ಹಾಲಿ ನಿರ್ದೇಶಕರೂ ಆದ ಕೆ.ಚಂದ್ರಶೇಖರ ಆಲಂಕಾರು, ನಿರ್ದೇಶಕರಾದ ಸೇಸಪ್ಪ ಪೂಜಾರಿ ನೆಕ್ಕಿಲಾಡಿ, ಜಯಕರ ಪೂಜಾರಿ ಕಲ್ಲೇರಿ, ಗಂಗಾರತ್ನ ವಸಂತ್ ಅಗತ್ತಾಡಿ, ಜಿನ್ನಪ್ಪ ಸಾಲ್ಯಾನ್ ಕಡಬ, ಜಯಂತ ಪೂಜಾರಿ ನೆಕ್ಕಿಲಾಡಿ, ಜಯಪ್ರಕಾಶ್ ದೋಳ, ಮಾಜಿ ನಿರ್ದೇಶಕರಾದ ಜನಾರ್ದನ ಬಿ.ಎಲ್ ಉಪಸ್ಥಿತರಿದ್ದರು.