ಜಿ.ಎಲ್.ಆಚಾರ್ಯ ಸಂಸ್ಥೆಯ ಬಲರಾಮ್ ಆಚಾರ್ಯರವರಿಗೆ ವಿಜಯರತ್ನ ಪ್ರಶಸ್ತಿ ಪ್ರದಾನ

0

ಪುತ್ತೂರು : ವಿಜಯವಾಣಿ ದಿನಪತ್ರಿಕೆ ಮತ್ತು ದಿಗ್ವಿಜಯ ಚಾನೆಲ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುವ ರಾಜ್ಯಮಟ್ಟದ ವಿಜಯರತ್ನ 2022 ಪ್ರಶಸ್ತಿಯನ್ನು ಪುತ್ತೂರು ಜಿ.ಎಲ್.ಆಚಾರ್ಯ ಸಂಸ್ಥೆಯ ನಿರ್ದೇಶಕ ಬಲರಾಮ್ ಆಚಾರ್ಯರವರಿಗೆ ನೀಡಿ ಗೌರವಿಸಲಾಯಿತು. ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಇವರು ಮಾಡಿದ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಿಜಯವಾಣಿ ಪತ್ರಿಕೆಯ ಆನಂದ ಸಂಕೇಶ್ವರರವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

LEAVE A REPLY

Please enter your comment!
Please enter your name here