ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಾಧನೆಗಾಗಿ – ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರಶಸ್ತಿ

0

ಪುತ್ತೂರು: ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ 2021-22 ಸಾಲಿನ ಸಾಧನೆಗಾಗಿ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಆಗಸ್ಟ್ 05 ರಂದು ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರಕುಮಾರ್ ಮತ್ತು ಆಡಳಿತ ಮಂಡಳಿಯವರು ಪುರಸ್ಕಾರ ನೀಡಿ ಗೌರವಿಸಿದರು.
ಸಂಘದ ಅಧ್ಯಕ್ಷೆ ಶ್ರೀಮತಿ ಗೌರಿ ಯಚ್. ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಬಾಲಕೃಷ್ಣ ಟಿ. ಇವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ಶ್ರೀಮತಿ. ಮೋಹಿನಿ ಪಿ ನಾಯ್ಕ ಹಾಗೂ ಶ್ರೀಮತಿ ಜಯಶ್ರೀ ಎಸ್ ಶೆಟ್ಟಿ , ದರ್ಬೆ ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ವಿದ್ಯಾ ಎಸ್. ಹಾಗೂ ಕಛೇರಿ ಸಹಾಯಕ ಶ್ರೀ ಧನುಷ್ ಎಂ. ಇವರು ಹಾಜರಿದ್ದರು.

LEAVE A REPLY

Please enter your comment!
Please enter your name here