ಪೆರುವಾಯಿ: ಕಣಜದ ಹುಳಗಳ ದಾಳಿ – ಗಾಯಾಳು ವ್ಯಕ್ತಿ ಮೃತ್ಯು

0

ವಿಟ್ಲ: ಪೆರುವಾಯಿ ಸಮೀಪ ಕಣಜದ ಹುಳುಗಳಿಂದ ದಾಳಿಗೊಳಗಾಗಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ‌‌ ವರದಿಯಾಗಿದೆ.

ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50 ವ.) ಮೃತದುರ್ದೈವಿ. ಪೆರುವಾಯಿ ಸಮೀಪ ಆ.8ರಂದು ಸಾಯಂಕಾಲದ ವೇಳೆ ಕಣಜದ ಹುಳುವಿನ ದಾಳಿಯಿಂದಾಗಿ ಗಾಯಗೊಂಡಿದ್ದ ಶ್ರೀಕೃಷ್ಣ ರವರನ್ನು ರಾತ್ರಿಯೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ‌ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆ.9ರಂದು ಮುಂಜಾನೆ‌ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಶ್ರೀಕೃಷ್ಣ ರವರು ಕೂಲಿ ಕೆಲಸ ಮಾಡಿಕೊಂಡು ಜೀವನ‌ಸಾಗಿಸುತ್ತಿದ್ದರು ಎಂದು ಮಾಹಿತಿ ಲಭಿಸಿದೆ.

LEAVE A REPLY

Please enter your comment!
Please enter your name here