ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸ್ವರ್ಣೋದ್ಯಮಿ ಜಿ.ಎಲ್.ಬಲರಾಮ ಆಚಾರ್ಯರಿಗೆ ಶಾಸಕರಿಂದ ಅಭಿನಂದನೆ

0

ಪುತ್ತೂರು: ಉದ್ಯಮ ಕ್ಷೇತ್ರದ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಾಧನೆಗೈದಿರುವುದಕ್ಕೆ ಸಂಬಂಧಿಸಿ ವಿಆರ್ ಎಲ್ ಸಮೂಹ ಸಂಸ್ಥೆಯ ವಿಜಯವಾಣಿ ಮತ್ತು ದಿಗ್ವಿಜಯ 24/7 ನ್ಯೂಸ್ ಚಾನಲ್ ವತಿಯಿಂದ ‘ವಿಜಯರತ್ನ-2022’ ಪ್ರಶಸ್ತಿ ಪುರಸ್ಕೃತಗೊಂಡ ಪುತ್ತೂರಿನ ಸ್ವರ್ಣೋದ್ಯಮಿ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್‍ಸ್‌ನ ಮಾಲಕ ಜಿ.ಎಲ್.ಬಲರಾಮ ಆಚಾರ್ಯರವರನ್ನು ಶಾಸಕ ಸಂಜೀವ ಮಠಂದೂರು ಅವರು ಆ.9ರಂದು ಅಭಿನಂದಿಸಿದರು.

ಜಿ.ಎಲ್.ಕಾಂಪ್ಲೆಕ್ಸ್‌ನಲ್ಲಿರುವ ಜಿ.ಎಲ್.ಬಲರಾಮ ಆಚಾರ್ಯರವರ ಕಚೇರಿಯಲ್ಲಿ ಅಭಿನಂದಿಸಲಾಯಿತು. ಶಾಸಕರು ಶಾಲು ಹೊದಿಸಿ, ಹೂವಿನ ಬೊಕ್ಕೆ ನೀಡಿ ಅಭಿನಂದಿಸಿದರು. ಜಿ.ಎಲ್.ಬಲರಾಮ ಅಚಾರ್ಯರವರಿಂದ ಇನ್ನಷ್ಟು ಸಮಾಜ ಸೇವೆ ಸಿಗುವ ಮೂಲಕ ಉದ್ಯಮ ಕ್ಷೇತ್ರದಲ್ಲೂ ಪುತ್ತೂರಿಗೆ ಇನ್ನಷ್ಟು ಕೀರ್ತಿ ತರಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯರಾದ ಅಪ್ಪಯ್ಯ ಮಣಿಯಾಣಿ, ಪ್ರಭಾರಿ ಗೋಪಾಲಕೃಷ್ಣ ಹೇರೆಳೆ, ನಗರ ಮಂಡಲದ ಅಧ್ಯಕ್ ಪಿ.ಜಿ.ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ವಿಶ್ವನಾಥ ಕುಲಾಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here