ಪುತ್ತೂರು: ಉದ್ಯಮ ಕ್ಷೇತ್ರದ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಾಧನೆಗೈದಿರುವುದಕ್ಕೆ ಸಂಬಂಧಿಸಿ ವಿಆರ್ ಎಲ್ ಸಮೂಹ ಸಂಸ್ಥೆಯ ವಿಜಯವಾಣಿ ಮತ್ತು ದಿಗ್ವಿಜಯ 24/7 ನ್ಯೂಸ್ ಚಾನಲ್ ವತಿಯಿಂದ ‘ವಿಜಯರತ್ನ-2022’ ಪ್ರಶಸ್ತಿ ಪುರಸ್ಕೃತಗೊಂಡ ಪುತ್ತೂರಿನ ಸ್ವರ್ಣೋದ್ಯಮಿ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನ ಮಾಲಕ ಜಿ.ಎಲ್.ಬಲರಾಮ ಆಚಾರ್ಯರವರನ್ನು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರು ಆ.9ರಂದು ಜಿ.ಎಲ್.ಕಾಂಪ್ಲೆಕ್ಸ್ನಲ್ಲಿರುವ ಜಿ.ಎಲ್.ಬಲರಾಮ ಆಚಾರ್ಯರವರ ಕಚೇರಿಯಲ್ಲಿ ಅಭಿನಂದಿಸಿದರು.